ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ

Karnataka:

Font size:

ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಬೌದ್ಧ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಮಾಡಲಾಗಿದೆ. ತಮಿಳುನಾಡಿನಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ ಎಂದರು.

ತಮಿಳುನಾಡಿನ ವರದಿ ಪರಿಶೀಲಿಸಿದ ಬಳಿಕ ಕ್ರಮವೆಂದ ಸಿಎಂ
ಸಚಿವ ಪ್ರಿಯಾಂಕ್​ ಖರ್ಗೆಗೆ ಬೆದರಿಕೆ ವಿಚಾರವಾಗಿ ಮಾತನಾಡಿದ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್​ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್​ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್​ ಖರ್ಗೆ ಪತ್ರ ಬರೆದಿರುವುದರಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು. ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ‌. ತಮಿಳುನಾಡಿನ ಆ ಆದೇಶದ ವರದಿಯನ್ನು ಸಿಎಸ್​ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Comments

Leave a Comment

Prev Post ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’
Next Post ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದವಳು ದುರಂತ ಅಂತ್ಯ

ರಾಜಕೀಯಕ್ಕೆ ಎಂಟ್ರಿ ಆಗ್ಬೇಕಾ? ಅದಕ್ಕೂ ಬರಲಿದೆ ಕೋರ್ಸ್! ಬೆಂಗಳೂರಿನಲ್ಲಿ ಮುಂದಿನ ವರ್ಷ ಶುರುವಾಗತ್ತೆ ರಾಜಕೀಯ ಪದವಿ ಕಾಲೇಜು

ರಾಜಕೀಯ ಅಧ್ಯಯನ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರಿನಲ್ಲಿ 2026ರ ಜೂನ್‌ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದು ಮೂರು ವರ್ಷಗಳ ಕೋರ್ಸ್ ಆಗಿದ್ದು, ರಾಜಕೀಯ ನೀತಿ ಸಂಹಿತೆ ಮತ್ತು ಸಿದ್ಧಾಂತ ವಿಷಯಗಳನ್ನು ಒಳಗೊಂಡಿರುತ್ತದೆ. ಪಠ್ಯಕ್ರಮ ರೂಪಿಸಲು ನಿವೃತ್ತ ಪ್ರಾಧ್ಯಾಪಕರು ಹಾಗೂ ಹಿರಿಯ ರಾಜಕಾರಣಿಗಳ ಸಲಹೆ ಪಡೆಯಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಗುಜರಾತ್ ಹೊಸ ಕ್ಯಾಬಿನೆಟ್: ಹರ್ಷ್ ಸಾಂಘ್ವಿ ಅತ್ಯಂತ ಕಿರಿಯ ಡಿಸಿಎಂ; ರವೀಂದ್ರ ಜಡೇಜಾ ಪತ್ನಿ ಸೇರಿ 26 ಮಂತ್ರಿಗಳು

Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Read all News