ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಬೌದ್ಧ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಮಾಡಲಾಗಿದೆ. ತಮಿಳುನಾಡಿನಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ ಎಂದರು.
ತಮಿಳುನಾಡಿನ ವರದಿ ಪರಿಶೀಲಿಸಿದ ಬಳಿಕ ಕ್ರಮವೆಂದ ಸಿಎಂ
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರವಾಗಿ ಮಾತನಾಡಿದ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವುದರಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು. ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ತಮಿಳುನಾಡಿನ ಆ ಆದೇಶದ ವರದಿಯನ್ನು ಸಿಎಸ್ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.









Comments
Leave a Comment